ಶನಿವಾರ, ಅಕ್ಟೋಬರ್ 11, 2008
ಕಾಡಿನ ರಾಜ ಹುಲಿರಾಯನ ಸಂಖ್ಯೆ ದಿನೇ ದಿನೇ ಕುಗ್ಗುತ್ತಿದೆ. ಇಡೀ ಭಾರತ ದೇಶವನ್ನು ತಡಕಾಡಿದರೆ 1400ಕ್ಕಿಂತ ಹೆಚ್ಚು ಹುಲಿಗಳು ಸಿಗಲಾರವು. ಈ ದೇಶದ ರಾಷ್ಟ್ರೀಯ ಪ್ರಾಣಿ ಹುಲಿ ಇಲ್ಲವಾಗುತ್ತಿರುವುದು ಈ ದೇಶದ ಶೇಮ್ ಶೇಮ್!
ಅತಿ ಹೆಚ್ಚು ಅಂದರೆ ಉತ್ತರ ಪ್ರದೇಶ ರಾಜ್ಯದಲ್ಲಿ 920 ಹುಲಿಗಳಿವೆ. ಅತಿ ಕಡಿಮೆ ಅಂದರೆ ಗುಜರಾತ್ನಲ್ಲಿ ಒಂದು ಹುಲಿ ಮಾತ್ರ. ಕೇಂದ್ರಾಡಳಿತ ಪ್ರದೇಶಗಳಲ್ಲಿ ಒಂದು ಹುಲಿಯೂ ಇಲ್ಲ.
ಹುಲಿ ಸಂರಕ್ಷಣೆ ಕುರಿತಂತೆ ಕರ್ನಾಟಕ ರಾಜ್ಯದ ಪರಿಸ್ಥಿತಿ ಪರವಾಗಿಲ್ಲ ಅನ್ನಬಹುದು. ಕರ್ನಾಟಕ ಸರ್ಕಾರ ಅರಣ್ಯ ಇಲಾಖೆಯ ವನ್ಯಜೀವಿ ಘಟಕ ಹುಲಿ ಸಂರಕ್ಷಣೆಗೆ ಹಲವು ಕಾರ್ಯಕ್ರಮ ರೂಪಿಸಿದೆ. ಒಟ್ಟು 350 ಹುಲಿಗಳನ್ನು ಕರ್ನಾಟಕದಲ್ಲಿ ಗುರುತಿಸಲಾಗಿದೆ. ಇಲ್ಲಿ ನಾಲ್ಕು ರಾಷ್ಟ್ರೀಯ ಉದ್ಯಾನ ವನಗಳಿವೆ. ಇವುಗಳಲ್ಲಿ ನಾಗರಹೊಳೆ ಉದ್ಯಾನವನದಲ್ಲಿ 14 ಹುಲಿಗಳಿದ್ದರೆ, ಬಂಡೀಪುರ ಉದ್ಯಾನ ವನದಲ್ಲಿ 24 ಹುಲಿಗಳಿವೆ.
ಹುಲಿ ಸಂಖ್ಯೆ ಕಡಿಮೆಯಾಗುತ್ತಿರುವುದು ಇಡೀ ದೇಶವನ್ನು ಆತಂಕಕ್ಕೆ ಈಡು ಮಾಡಿದೆ. ಈ ವಿಚಾರ ರಾಷ್ಟ್ರೀಯ ಮಟ್ಟದಲ್ಲಿ ಬಹಳ ಗಂಭೀರವಾದ ಚರ್ಚೆ ನಡೆಯುತ್ತಿದೆ.
ಮುಖ್ಯವಾಗಿ ಹುಲಿ ಸಂಖ್ಯೆ ಕ್ಷೀಣಿಸಲು ಅಕ್ರಮ ಬೇಟೆಯೇ ಕಾರಣ. ವಿದೇಶದಲ್ಲಿ ಹುಲಿಯ ಅಂಗಗಳಿಗೆ ಬಹಳ ಬೇಡಿಕೆ ಇದೆ. ಔಷಧ ತಯಾರಿಕೆಯಲ್ಲಿ ಹುಲಿ ಅಂಗಗಳನ್ನು ಮುಖ್ಯವಾಗಿ ಬಳಸಲಾಗುತ್ತದೆ. ಚೈನಾಕ್ಕೆ ಭಾರತೀಯ ಹುಲಿಗಳ ಅಂಗಗಳು ಅಕ್ರಮವಾಗಿ ರವಾನೆಯಾಗುತ್ತಿವೆ ಎಂಬ ವರದಿಯಿದೆ.
ಪ್ರಕೃತಿ ಕೂಡ ಹುಲಿ ರಕ್ಷಣೆಗೆ ಮಾರಕವಾಗಿದೆ. ಒಂದು ಪ್ರಾಣಿಯ ಆಹಾರವಾಗಿ ಇನ್ನೊಂದು ಪ್ರಾಣಿಯನ್ನು ಬಲಿಕೊಡಬೇಕು ಎಂದು ಫುಡ್ ಚೈನ್ ಹೇಳುತ್ತದೆ. ದೊಡ್ಡ ಮೀನು ಸಣ್ಣ ಮೀನನ್ನು ತಿಂದು ಬದುಕುವಂತೆ. ದೊಡ್ಡ ಹುಲಿ ಸಣ್ಣ ಹುಲಿಯನ್ನು ತನ್ನ ಹೊಟ್ಟೆಗಾಗಿ ಬಲಿಕೊಡುತ್ತಿದೆ.
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ